‘‘ಇವನ್ಯಾರವ... ಇವನ್ಯಾರವ... ಎನ್ನದಿರಯ್ಯ. ಇವ ನಮ್ಮವ... ಇವ ನಮ್ಮವ... ಎಂದೆಣಿಸಯ್ಯ ಕೂಡಲ ಸಂಗಮದೇವ’’

ಪೃಥ್ವಿಯನತಿಗಳೆದ ಸ್ಥಾವರಂಗಳಿಲ್ಲ

ಪೃಥ್ವಿಯನತಿಗಳೆದ ಸ್ಥಾವರಂಗಳಿಲ್ಲ;
ಅಪ್ಪುವನತಿಗಳೆದ ತೀರ್ಥಯಾತ್ರೆಗಳಿಲ್ಲ.
ಅಗ್ನಿಯನತಿಗಳೆದ ಹೋಮ ಸಮಾಧಿಗಳಿಲ್ಲ.
ವಾಯುವನತಿಗಳೆದ ನೇಮನಿತ್ಯಂಗಳಿಲ್ಲ.
ಆಕಾಶವನತಿಗಳೆದ ಧ್ಯಾನ ಮೌನಂಗಳಿಲ್ಲ.
ಗುಹೇಶ್ವರನೆಂದರಿದವಂಗೆ ಇನ್ನಾವಂಗವೂ ಇಲ್ಲ.